ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ

0

ಜಾಲ್ಸೂರಿನ ಅಡ್ಕಾರ್ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ಶ್ರೀ ದೇವರಿಗೆ ಬಲಿವಾಡು ಸೇವೆ, ಮಹಾಪೂಜೆ ಆ. 17 ರಂದು ನಡೆಯಿತು.

ಬೆಳಗ್ಗೆ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಭಜನಾ ಸೇವೆ ನಡೆಯಿತು.

ಸೋಣ ಶನಿವಾರ ಪ್ರಯುಕ್ತ ಸುಮಾರು 400 ಮಂದಿ ಭಕ್ತಾದಿಗಳು ಅನ್ನದಾನ ಸ್ವೀಕರಿಸಿದರು.

ದೇವಾಲಯದ ಅನುವಂಶಿಕ ಆಡಳಿತ ಮೋಕ್ತೆಸರ ಗುರುರಾಜ್ ಭಟ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರುಗಳು, ಜೀರ್ಣೋದ್ದಾರ ಸಮಿತಿಯ ಸದಸ್ಯರುಗಳು, ಬೈಲುವಾರು ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.