ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸ್ಪರ್ಧೆ

0

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ 78ನೇ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ತರಗತಿವಾರು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆ.17 ರಂದು ಆಯೋಜಿಸಲಾಗಿತ್ತು.

ಸ್ಪರ್ಧೆಗೆ ತೀರ್ಪುಗಾರರಾಗಿ ಶ್ರೀಮತಿ ವಿಮಲಾ ರಂಗಯ್ಯ, ಶ್ರೀಮತಿ ಭಾರತಿ ದಿನೇಶ್ ,ಶ್ರೀಮತಿ ಲತಾ ಸರ್ವೇಶ್ವರ್ ಸಹಕರಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಿ ಪ್ರಾಂಶುಪಾಲರು ಡಾ. ದಿನೇಶ ಪಿ.ಟಿ, ,ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಯೋಜಕರಾದ ,ಡಾ. ವಿನ್ಯಾಸ್ ಹೊಸೋಳಿಕೆ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಆರತಿ ಸ್ವಾಗತಿಸಿ, ಉಪನ್ಯಾಸಕಿಯಾದ ಕು.ದಿವ್ಯ ಮುಡೂರ್ ವಂದಿಸಿದರು. ಹ ಉಪನ್ಯಾಸಕಿಯಾದ ಕು. ಭಕ್ತಿ ಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ತೃತೀಯ ಬಿಎ, ದ್ವಿತೀಯ ಸ್ಥಾನ ತೃತೀಯ ಬಿಕಾಂ, ತೃತೀಯ ಸ್ಥಾನವನ್ನು ಪ್ರಥಮ ಬಿಬಿಎ ಪಡೆದುಕೊಂಡಿತು.