ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದಿಂದ ರಕ್ಷಾಬಂಧನ

0

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ.ಯಂ.ಯಸ್ ಸಂಯೋಜಿತ ಇದರ ವತಿಯಿಂದ ಆ. 19ರಂದು ರಕ್ಷಾ ಬಂಧನದ ಕಾರ್ಯಕ್ರಮವನ್ನು ಕಾರ್ಮಿಕ ತಿಲಕ ಭವನದ ಕಟ್ಟಡದ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಯಂ.ಯಸ್ ಅಟೋ ರಿಕ್ಷಾ ಚಾಲಕರ ಸಂಘದ ರಾಧಾಕೃಷ್ಣ ಬೈತಡ್ಕ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ, ಕೋಶಾಧಿಕಾರಿ ಉಪಸ್ಥಿತರಿದ್ದರು. ಸಹೋದರತೆಯ ಸಂಕೇತವಾದ ರಕ್ಷಾ ಬಂಧನವನ್ನು ಎಲ್ಲಾ ಪಧಾದಿಕಾರಿಗಳು ಹಾಗೂ ಸದಸ್ಯ ರಿಕ್ಷಾ ಚಾಲಕರು ಒಬ್ಬರಿಗೊಬ್ಬರು ಕಟ್ಟಿದರು.