ಸುಳ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ನಿರ್ಮಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

0

ಸುಳ್ಯದ ಮಿನಿವಿಧಾನಸೌಧದ ಬಳಿ ಭಾರತದ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಿಸುವಂತೆ ಆಗ್ರಹಿಸಿ ಸುಳ್ಯದ ಸಂವಿಧಾನ ಬದ್ಧ ಸಮಾನ ಮನಸ್ಕರ ಬಳಗದ ವತಿಯಿಂದ ಆ 18 ರಂದು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಂತೋಷ್ ಕುಮಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಸಂವಿಧಾನ ಬದ್ಧ ಸಮಾನ ಮನಸ್ಕರ ಬಳಗದ ಸಂಚಾಲಕರಾದ ಎ.ಕೆ.ಇಬ್ರಾಹಿಂ, ಸದಸ್ಯರುಗಳಾದ ಕೆ.ಪಿ.ಜಾನಿ ಕಲ್ಲುಗುಂಡಿ, ಲಕ್ಷೀಷ ಗಬ್ಲಡ್ಕ ಹಾಗೂ ಮಹಮ್ಮದ್ ಕುಂಞ ಗೂನಡ್ಕರವರು ಉಪಸ್ಥಿತರಿದ್ದರು.