ಎನ್.ಪಿ.ಎಸ್. ನೌಕರರ ಸಂಘ : ರಾಜ್ಯ ಉಪಾಧ್ಯಕ್ಷರಾಗಿ ಪೃಥ್ವಿಕುಮಾರ್ ಟಿ. ಆಯ್ಕೆ

0

ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪೃಥ್ವಿ ಕುಮಾರ್ ಟಿ. ಆಯ್ಕೆಯಾಗಿದ್ದಾರೆ.

ಆ.17ರಂದು‌ ಬೆಂಗಳೂರಿನಲ್ಲಿ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಪೃಥ್ವಿಕುಮಾರ್ ರವರು ಸರಕಾರಿ‌ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.