ಚೊಕ್ಕಾಡಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ

0

ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಮತ್ತು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯು‌ ಆ. 21 ರಂದು ನಡೆಯಿತು.

ಚೊಕ್ಕಾಡಿ ವಿದ್ಯಾಸಂಸ್ಥೆಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ದೀಪ ಪ್ರಜ್ವಲಿಸಿದರು.

ಶಿಕ್ಷಣ ಸಂಯೋಜಕಿ‌ ಶ್ರೀಮತಿ ಸಂಧ್ಯಾ ಕುಮಾರಿ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ಶ್ರೀಕಾಂತ್ ಸುಳ್ಯ, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಾಹಣಾಧಿಕಾರಿ ವಿತ್ವಾರ,
ಟೆಕ್ನೋಲಾಜಿಸ್ ಮಂಗಳೂರು, ಚೊಕ್ಕಾಡಿ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಚೊಕ್ಕಾಡಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರತಿಭಾ ಎಸ್ ಆಳ್ವ ಉಪಸ್ಥಿತರಿದ್ದರು. ರಮ್ಯ ಕೆ, ತೃಪ್ತಿ ಕೆ ಆರ್, ಕೃತಿ, ಪವಿತ್ರ ಎನ್, ತೃಪ್ತಿ ಪ್ರಾರ್ಥಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿದರು.ಶಿಕ್ಷಕರಾದ ಶ್ರೀಮತಿ ಜಯಶ್ರೀ ಎಂ ವಂದಿಸಿದರು. ಹರಿಪ್ರಸಾದ ಕೆ ಕಾರ್ಯಕ್ರಮ ನಿರೂಪಿಸಿದರು.