ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿಸಕ್ಷಮ್’ ಕಾರ್ಯಾಗಾರ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆ. 21ರಂದು ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಇದರ ಸಹಯೋಗದೊಂದಿಗೆ ನಡೆಯಲಿರುವ ಎರಡು ದಿನದ ‘ಸಕ್ಷಮ್’ ಕಾರ್ಯಾಗಾರವನ್ನು
ಕಾರ್ಯಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ನ ತರಬೇತುದಾರರಾದ ಶ್ರೀಹರಿ ಪಿ ಗುಪ್ತ ಕಾರ್ಯಗಾರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಷವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತ ಎಂ, ಕಾಲೇಜಿನ ಭೋದಕ ಭೋದಕೇತರ ಸಿಬ್ಬಂದಿ ವರ್ಗದವರು, ಕಾಲೇಜಿನ ಕಿರಿಯ ವೈದ್ಯರುಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಬೆಂಗಳೂರು ಫಾರ್ಮಸಿಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಅನುಸಾರ, ಕಾಲೇಜಿನ ಕಿರಿಯ ವೈದ್ಯರುಗಳು ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಂವಹನ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಸಲುವಾಗಿ ಎರಡು ದಿನದ ‘ಸಕ್ಷಮ್’ ಕಾರ್ಯಾಗಾರವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಗಾರವನ್ನು ನವದೆಹಲಿಯಿಂದ ಪರಿಣತಿ ತರಬೇತುದಾರರಾಗಿ ನಿಯುಕ್ತರಾದ ಶ್ರೀಹರಿ ಪಿ ಗುಪ್ತ ನಡೆಸಿಕೊಡಲ್ಲಿದ್ದಾರೆ.
ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಡಾ. ಅಪೂರ್ವ ಕಾರ್ಯಕ್ರಮ ನಿರೂಪಿಸಿದರು. ಡಾ. ಶುಭಶ್ರೀ, ಡಾ. ರೇಣುಕಾ ಮತ್ತು ಡಾ. ತನುಶ್ರೀ ಪ್ರಾರ್ಥಿಸಿದರು. ಕಾರ್ಯಗಾರದ ತರಬೇತುದಾರರ ಪರಿಚಯವನ್ನು ಡಾ. ಅನುಷಾ ಮಡಪ್ಪಾಡಿ ಮಾಡಿದರು.