ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಆಡಳಿತ ಕಛೇರಿಯಲ್ಲಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 12 ನೇ ಪುಣ್ಯಸ್ಮರಣೆ

0

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ ೧೨ನೇ ಪುಣ್ಯ ಸ್ಮರಣಿಯ ಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಆಡಳಿತ ಕಛೇರಿಯಲ್ಲಿ ನಡೆಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ ಬಿ ಆಡಳಿತದಡಿಯಲ್ಲಿರುವ ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು..ಜೆ ಯವರು ಅಮ್ಮನ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೆ.ವಿ.ಜಿ. ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಶ್ರೀ ಶ್ರೀಧರ್ ಎಂ.ಕೆ, ಉಪ ಪ್ರಾಂಶುಪಾಲರಾದ ಅಣ್ಣಯ್ಯ, ಲೆಕ್ಕ ಅಧೀಕ್ಷಕರಾದ ಧನಂಜಯ ಕಲ್ಲುಗದ್ದೆ, ದಂತ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ, ಇಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ದೈಹಿಕ ಶಿಕ್ಷಕ ಭಾಸ್ಕರ ಬೆಳಗದ್ದೆ, ಕೆ.ವಿ.ಜಿ ಪಾಲಿಟೆಕ್ನಿಕ್‌ನ ಸಿಬ್ಬಂದಿಗಳಾದ ಪ್ರಸನ್ನ ಕಲ್ಲಾಜೆ, ಕಮಲಾಕ್ಷ ನಂಗಾರು, ಅರುಣ್ ಕುರುಂಜಿ, ದಯಾನಂದ ಅಟ್ಲೂರು, ಡೆಂಟಲ್ ಕಾಲೇಜಿನ ಸಿಬ್ಬಂದಿಗಳಾದ ಪದ್ಮನಾಭ ಕಾನಾವುಜಾಲು, ಶ್ರೀಮತಿ ಸ್ವಾತಿ ಎಂ.ಎನ್ ಹಾಜರಿದ್ದು ಶ್ರೀಮತಿ ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಅವರನ್ನು ಸ್ಮರಣೆ ಮಾಡಿಕೊಂಡರು.