ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಗಾರ

0

ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಆ.23 ರಂದು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸುಬ್ರಹ್ಮಣ್ಯ ಗ್ರಾ.ಪಂ ಉಪಾಧ್ಯಕ್ಷರಾದ ವೆಂಕಟೇಶ್ ಎಚ್.ಎಲ್ ಮಾಡಿದರು . ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ. ಉಪಸ್ಥಿತರಿದ್ದರು.

ವೃತ್ತಿ ಮಾರ್ಗದರ್ಶನ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಡಾ. ಕೃಷ್ಣಮೂರ್ತಿ ಒಂದು ದಿನದ ತರಬೇತಿಯನ್ನು ನಡೆಸಿಕೊಟ್ಟರು. ವೇದಿಕೆಯಲ್ಲಿ ಮಹಾವಿದ್ಯಾಲಯದ IQAC ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಕಾರ್ಯದರ್ಶಿಗಳಾದ ಚಿದಾನಂದ ಕುಳ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ, ತೃತೀಯ ಪದವಿಯ ಕಲ್ಪನಾ ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಓದಿದರು, ಮಹಾವಿದ್ಯಾಲಯದ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಸಂಯೋಜಕರಾದ ಶ್ರೀಮತಿ ಆರತಿ ಕೆ ಧನ್ಯವಾದ ಸಮರ್ಪಿಸಿದರು. ರೊಟೆರಿಯನ್ ಸದಸ್ಯ ಲೋಕೇಶ್ , ಪೂರ್ವ ವಿದ್ಯಾರ್ಥಿ ಸಂಘದ ಸದಸ್ಯೆ, ಶ್ರೀಮತಿ ವಿಮಲಾ ರಂಗಯ್ಯ ಭಾಗವಹಿಸಿದರು.