ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್. ಸಿ.ಡಿ.ಸಿ.ಸಿ.ಬ್ಯಾಂಕಿನಿಂದ ಪ್ರೋತ್ಸಾಹಕ ಬಹುಮಾನ

0

ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಬಹುಮಾನ ನೀಡುವ ಮೂಲಕ ಅಭಿನಂದಿಸಲಾಯಿತು.

ಸಂಘವು ಸ್ವಂತವಾಗಿ ಕೃಷಿ ಜಮೀನುನ್ನು ಹೊಂದಿದ್ದು, ಸದರಿ ಜಮೀನಿನಲ್ಲಿ ರೈತರಿಗೆ ಮಾದರಿಯಾಗಿ ಆಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ವಿವಿಧ ಉಪಬೆಳೆಗಳೊಂದಿಗೆ ಅಡಿಕೆ ಕೃಷಿ ತೋಟವನ್ನು ನಿರ್ಮಿಸಿದೆ .ಹಾಗೂ ಸಂಘದ ಸರ್ವತೋಮುಖ ಅಭಿವೃದ್ಧಿಯ ಸಾಧನೆಯನ್ನು ಪರಿಗಣಿಸಿ ವಿಶೇಷವಾಗಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ.


ಮಂಗಳೂರಿನಲ್ಲಿ ನಡೆದ ಎಸ್. ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಉದಯ ಕುಮಾರ್ ಬೆಟ್ಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಜೆ ರವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ ನಡ್ಕ , ಮೇಲ್ವಿಚಾರಕ ಪ್ರದೀಪ್ ಕೆ ಉಪಸ್ಥಿತರಿದ್ದರು.