ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ.ಬ್ಯಾಂಕಿನಿಂದ ಪ್ರೋತ್ಸಾಹಕ ಬಹುಮಾನ

0

ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಬಹುಮಾನ ನೀಡುವ ಮೂಲಕ ಅಭಿನಂದಿಸಲಾಯಿತು.

ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೇಶವ ಕರ್ಮಾಜೆ ಹಾಗೂ ಸಿ.ಇ.ಒ ಮೋಹನ್ ಕುಮಾರ್ ಪಿ ಯವರು ಪ್ರಶಸ್ತಿ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಸಂಘದಮಾಜಿ ಅಧ್ಯಕ್ಷ ರಾಘವೇಂದ್ರಪುಳಿಮಾರಡ್ಕ, ನಿರ್ದೇಶಕರಾದ ರಾಧಾಕೃಷ್ಣ ಬೊಳ್ಳೂರು, ಲತೇಶ್ವರಿ ಮಾಯ್ಪಡ್ಕ, ನಿರಂಜನ್ ಉಪಸ್ಥಿತರಿದ್ದರು.