ಆ.26: ಸೋಣಂಗೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0

ಜಾಲ್ಸೂರು ಗ್ರಾಮದ ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಯು ಆ.26ರಂದು ಜರುಗಲಿದೆ.

ಆ.26ರಂದು ಬೆಳಿಗ್ಗೆ ನಿವೃತ್ತ ಉಪನ್ಯಾಸಕ ಎಂ. ಶಾಂತರಾಮ ಹೊಸಗದ್ದೆ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯರಾದ ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ದೀಪಾ ಸೋಣಂಗೇರಿ ಅವರು ಉಪಸ್ಥಿತರಿರಲಿದ್ದಾರೆ.

ಬಳಿಕ ಸಾರ್ವಜನಿಕ ಸ್ಪರ್ಧಾ ಕಾರ್ಯಕ್ರಮಗಳು ಜರುಗಲಿದ್ದು, ಪುರುಷರಿಗೆ ಲಕ್ಕೀಗೇಮ್, ಮೊಸರು ಕುಡಿಕೆ, ತೆಂಗಿನಕಾಯಿಗೆ ಕಲ್ಲು ಹೊಡೆಯುವುದು, ತೆಂಗಿನ ಕಾಯಿ ಕುಟ್ಟುವುದು, ಹಗ್ಗಜಗ್ಗಾಟ, ಚೆನ್ನಮಣೆ ಹಾಗೂ ಮಹಿಳೆಯರಿಗೆ ಹಣತೆ ಹಚ್ಚುವುದು, ಮೊಸರು ಕುಡಿಕೆ, ಲಕ್ಕೀಗೇಮ್, ಹಗ್ಗಜಗ್ಗಾಟ, ಚೆನ್ನಮಣೆ ಸ್ಪರ್ಧೆಗಳು ಜರುಗಲಿದೆ.

ಸಂಜೆ ಊರಿನ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ಸ್ಪರ್ಧೆ ಜರುಗಲಿದ್ದು, ಭಕ್ತಿಗೀತೆ, ಚೀಟಿ ಎತ್ತಿ ಅಭಿನಯ, ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡ ಯನ್. ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ತಂಗಮ್ಮ ಕೆ.ಎಸ್. ಅವರು ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ‌.ಪಂ. ಸದಸ್ಯರುಗಳಾದ ಈಶ್ವರ ನಾಯ್ಕ ಸೋಣಂಗೇರಿ, ಶ್ರೀಮತಿ ಅಂಬಿಕಾ ಕುಕ್ಕಂದೂರು ಉಪಸ್ಥಿತರಿರಲಿದ್ದಾರೆ.
ರಾತ್ರಿ ಅಷ್ಟಮಿ ಪ್ರಯುಕ್ತ ವಿಶೇಷ ಭಜನೆ ನಡೆಯಲಿದೆ.