ಆ.26: ಆಲೆಟ್ಟಿ ಸದಾಶಿವ ದೇವಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ- ಸಾಮೂಹಿಕ ಸತ್ಯನಾರಾಯಣ ಪೂಜೆ

0

ಆಲೆಟ್ಟಿ ಶ್ರೀ ಸದಾಶಿವ ದೇವಳದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಆ.26 ರಂದು ನಡೆಯಲಿದೆ.

ಬೆಳಗ್ಗೆ ಅರ್ಚಕರಿಂದ ನಿತ್ಯ ಪೂಜೆಯು ನಡೆದು ಬಳಿಕ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆಯು ನಡೆಯಲಿದ್ದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಲಿದೆ.
ಪೂರ್ವಾಹ್ನ ಅಷ್ಠಮಿಯ ಪ್ರಯುಕ್ತ ಸ್ಫರ್ಧಾ ಕಾರ್ಯಕ್ರಮವನ್ನು ರೋಟರಿ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ರೊ.ಗಿರಿಜಾಶಂಕರ ತುದಿಯಡ್ಕ ರವರು ಉದ್ಘಾಟಿಸಿ ಚಾಲನೆ ನೀಡಲಿರುವರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಎನ್.ಎ.ರಾಮಚಂದ್ರ, ಪುರುಷೋತ್ತಮ ಕೋಲ್ಚಾರು, ಅಶೋಕ ಪ್ರಭು ಸುಳ್ಯ, ಪ್ರಸನ್ನ ಕೆ.ಸಿ ಬಡ್ಡಡ್ಕ ರವರು ಉಪಸ್ಥಿತರಿರುವರು.

ಬಳಿಕ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳುನಡೆಯಲಿದೆ.ಸಂಜೆ ಗಂಟೆ 6.00 ರಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದು.