ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆ

0

ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿ; ಐತಪ್ಪ ನಾಯ್ಕ್

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಆಯ್ಕೆಯಾಗಿದ್ದಾರೆ. ಇಂದು ಗಿರಿದರ್ಶಿನಿ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಜನಾರ್ದನ ಬಿ.ಕುರುಂಜಿಭಾಗ್, ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿಯಾಗಿ ಐತಪ್ಪ ನಾಯ್ಕ್, ಉಪಾಧ್ಯಕ್ಷರಾಗಿ ಶ್ರೀಮತಿ ಸುಲೋಚನ, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಪದ್ಮಾವತಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗದೀಶ್ ಅರಂಬೂರು, ಶ್ರೀಮತಿ ಶೋಭಾ ಎ.ಕೆ., ಈಶ್ವರ ವಾರಣಾಶಿ,ನಿತ್ಯಾನಂದ ಕುಡೆಂಬಿ,ಭವಾನಿಶಂಕರ ಕಲ್ಮಡ್ಕ, ಜನಾರ್ದನ ನಾಯ್ಕ್ ಕೇರ್ಪಳ ಆಯ್ಕೆಯಾದರು.