ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನೆ, ಸತ್ಸಂಗ

0


ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ.26 ರಂದು ಸಂಜೆ ಗಂಟೆ 6:30 ರಿಂದ 8:30 ತನಕ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಏನೆಕಲ್ಲು ಅಂಗನವಾಡಿ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ರಮೇಶ್‌ರವರಿಂದ ವಿಶೇಷ ಸತ್ಸಂಗ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.