ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ಕೃತಿ ಮಂತ್ರೋಪದೇಶ ಬಿಡುಗಡೆ

0


ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪೂಜೆ ಹಾಗೂ ಭಜನಾ ಸತ್ಸಂಗ ಕಾರ್ಯಕ್ರಮ


ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರ ೨೦೯ ಕೃತಿ ಮಂತ್ರೋಪದೇಶ ಬಿಡುಗಡೆ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪೂಜಾ ಕಾರ್ಯಕ್ರಮ ಹಾಗೂ ಡಾ.ಸಾಯಿಗೀತಾ ಬಳಗದವರಿಂದ ಭಜನಾ ಸತ್ಸಂಗ ಕಾರ್ಯಕ್ರಮ ಆ.೨೬ರಂದು ನಡೆಯಿತು.
ಸುಳ್ಯ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಸ್ವಾಮೀಜಿಯವರ ಕೃತಿ ಬಿಡುಗಡೆಗೊಳಿಸಿ ಮಾತನಾಡಿ , ಆಧುನಿಕ ಸಮಾಜದಲ್ಲಿ ಸ್ವಾರ್ಥಕ್ಕಾಗಿ ಮನುಷ್ಯ ಮನುಷ್ಯರ ನಡುವೆ ಸಂಬಂಧಗಳು ಕೆಡುತ್ತಿವೆ. ಈ ಹಿನ್ನಲೆ ಮನುಷ್ಯ ಮನುಷ್ಯರ ನಡುವೆ ಸಂಬಂಧಗಳನ್ನು ಗಟ್ಟಿಗೊಳಿಸುವ ಕೆಲಸ ನಡೆಯಬೇಕಾಗಿದೆ. ಹಿರಿಯರು ಋಷಿ ಮುನಿಗಳು ಹೇಳಿದ ಆದರ್ಶ ನುಡಿಗಳನ್ನು ನಾವು ಪಾಲಿಸಬೇಕೆಂದು ಹೇಳಿದರು.


ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಸುಳ್ಯ ಉದ್ಯಾನವನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಾಯಿಗೀತಾ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಸುಳ್ಯ ಕೆ.ವಿ.ಜಿ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನ ಪ್ರೊಪೆಸರ್ ಡಾ.ಹರ್ಷವರ್ಧನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಶ್ರಮದ ಟ್ರಸ್ಟಿ ಪ್ರಣವಿ, ರೈತ ಸಂಘದ ಉಪಾಧ್ಯಕ್ಷ ತೀರ್ಥರಾಮ ಪರ್ನೋಜಿ, ಇತರರು ಉಪಸ್ಥಿತರಿದ್ದರು.