ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

0

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆಚರಿಸಲಾಯಿತು.


ಬಾಳಿಲ ಗ್ರಾ.ಪಂ. ಸದಸ್ಯೆ ತ್ರಿವೇಣಿ ವಿಶ್ವೇಶ್ವರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಬಾಳಿಲ ಅಂಗನವಾಡಿ ಕೇಂದ್ರದ ಪುಟಾಣಿಗಳ ಶ್ರೀಕೃಷ್ಣ ವೇಷ ಸ್ಪರ್ಧೆ, ನೃತ್ಯ ಹಾಗೂ ಗೀತಾ ಜ್ಞಾನ ಯಜ್ಞ ಘಟಕ ಬಾಳಿಲ ಇದರ ಸದಸ್ಯರಿಂದ ಭಗವದ್ಗೀತಾ ಪಾರಾಯಣ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಕಾಂಚೋಡು ಮಂಜುನಾಥೇಶ್ವರ ದೇವಾಲಯದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬಾಳಿಲ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಶಿಕಲಾ, ಶ್ರೀಕೃಷ್ಣ ಸೇವಾ ಸಮಿತಿಯ ಅಧ್ಯಕ್ಷೆ ಪುಷ್ಪಾ ಗಣೇಶ್ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ದಯಾನಂದಿನಿ ಸ್ವಾಗತಿಸಿ, ಸರಿತಾ ಕಂಡಿಕಟ್ಟ ವಂದಿಸಿದರು.
ಬೇಬಿ ಅದಿತಿ ಪ್ರಾರ್ಥಿಸಿದರು.
ಜಾಹ್ನವಿ ಕಾಂಚೋಡು ಕಾರ್ಯಕ್ರಮ ನಿರೂಪಿಸಿದರು.