ಅಜ್ಜಾವರ-ಕಲ್ಲಗುಡ್ಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸನ್ಮಾನ

0

ಅಜ್ಜಾವರದ ಕಲ್ಲಗುಡ್ಡೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಪ್ರಕಾಶ್ ಕಲ್ಲಗುಡ್ಡೆ ವಹಿಸಿದರು.

ಉದ್ಘಾಟನೆಯನ್ನು ಸ್ಥಳಿಯ ಪುಟಾಣಿ ಮಕ್ಕಳು ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ರಾಜು ಪಂಡಿತ್ ಶಾರಾದಾಂಬ ಸೇವಾ ಸಮಿತಿ ಸುಳ್ಯ, ಡಾ. ಅವಿನಾಶ್ ಅಜ್ಜಾವರ ಸುಳ್ಯ, ಶ್ರೀಮತಿ ಗೀತಾ ಕಲ್ಲಗುಡ್ಡೆ ಸದಸ್ಯರು ಗ್ರಾಮ ಪಂಚಾಯತ್ ಅಜ್ಜಾವರ, ಶ್ರೀಮತಿ ದೇವಕಿ ಕಾಟಿಪಳ್ಳ ಸದಸ್ಯರು ಗ್ರಾಮ ಪಂಚಾಯತ್ ಅಜ್ಜಾವರ, ಸುರೇಶ್ ಕಾಟಿಪಳ್ಳ ಶಿಕ್ಷಕರು, ಶರಣ್ಯ ರಾವ್ ತುದಿಯಡ್ಕ ಉಪಾಧ್ಯಕ್ಷರು ವಿಷ್ಣು ಯುವಕ ಮಂಡಲ (ರಿ.) ಮೇನಾಲ ವೇದಿಕೆಯಲ್ಲಿ ಉಪಸ್ಥಿರಿದ್ದರು. ನಂತರ ವಿವಿಧ ಆಟೋಟ ಸ್ಪರ್ಧೆಗಳು ನಡೆದವು ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪನೆ ನಡೆದು ಸಂಜೆ ಪುಟಾಣಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ದೆ ನಡೆದ ಬಳಿಕ ಸಮಾರೋಪ ಸಮಾರಂಭ ಮತ್ತು ಬಹುಮಾನ ಕಾರ್ಯಕ್ರಮ ನಡೆಯಿತು ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಾಶ್ ಕಲ್ಲಗುಡ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಂಜೀತ್ ರೈ ಮೇನಾಲ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು, ರಾಜೇಶ್ ಪಣಿಕ್ಕರ್ ಇರಂತಮಜಲು ಮೇನಾಲ,ಶ್ರೀಮತಿ ಸರೋಜಿನಿ ಕರಿಯಮೂಲೆ ಸದಸ್ಯರು ಗ್ರಾಮ ಪಂಚಾಯತ್ ಅಜ್ಜಾವರ, ಆರಕ್ಷಕ ಠಾಣೆಯ ಸಿಬ್ಬಂದಿ ಶ್ರೀಮತಿ ನಳಿನಿ,ಚಂದ್ರಶೇಖರ ಕೆ ಪಲ್ಲತ್ತಡ್ಕ ನಿರ್ದೇಶಕರು AVSS ಸುಳ್ಯ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವೈದ್ಯರಾದ ಡಾಕ್ಟರ್ ಅವಿನಾಶ್ ಅಜ್ಜಾವರ ಮತ್ತು ರಾಜೇಶ್ ಪಣಿಕ್ಕರ್ ಇರಂತಮಜಲು ಇವರನ್ನು ಸನ್ಮಾನಿಸಲಾಯಿತು.