ಗೋಪಾಲಕೃಷ್ಣ ನಾಯಕ್ ರವರ ಪಂಜಿಗಾರು ನಿವಾಸದಲ್ಲಿ ರುದ್ರಹೋಮ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಂಜಿಗಾರು ಪೊಸವಳಿಗೆ ಇವರ ನಿವಾಸದಲ್ಲಿ ರುದ್ರಹೋಮ ಆ. 26ರಂದು ನಡೆಯಿತು.


ಬೆಳಿಗ್ಗೆ ಗಣಪತಿ ಹೋಮ, ಬಳಿಕ ರುದ್ರಹೋಮ, ಮಧ್ಯಾಹ್ನ ಶ್ರೀ ದೇವಿಯ ಸನ್ನಿಧಿಯಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಮಂತ್ರಾಕ್ಷತೆ ನೀಡಿದರು. ನೂರಾರು ಭಕ್ತಾದಿಗಳು, ಗೋಪಾಲಕೃಷ್ಣ ನಾಯಕ್ ರವರ ಕುಟುಂಬಸ್ಥರು, ಬಂಧು ಮಿತ್ರರು ಕಾರ್ಯಕ್ರಮದಲ್ಲಿ ಭಾಗವಹಿದ್ದರು.