ಮೇನಾಲ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆ.25 ರಂದು. ಮೇನಾಲ ಭಜನಾ ಮಂದಿರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಸಿದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷರಾದ ಸೋಮಶೇಖರ ಪೈಕ, ಶಾರದಾಂಬ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ನಾರಾಯಣ ಕೇಕಡ್ಕ, ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.

ಆಗಸ್ಟ್ 26 ರಂದು ಸಂಜೆ ಭಜನಾ ಕಾರ್ಯಕ್ರಮ ವರಮಹಾಲಕ್ಷ್ಮಿ ಪೂಜಾ ಸಮಿತಿಯವರಿಂದ ಕುಣಿತ ಭಜನೆ ಶ್ರೀ ಕೃಷ್ಣ ವೇಷ ಧರಿಸಿದ ಪುಟಾಣಿಗಳ ವಿವಿಧ ವಿನೋಧಾವಳಿಗಳು, ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ವಿವಿಧ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು. ಕಾರ್ಯಕ್ರಮದಲ್ಲಿ ಕು ಸಾಕ್ಷಿ ಸ್ವಾಗತಿಸಿ, ಕು ಪ್ರೇರಣಾ ಬಹುಮಾನಗಳ ಪಟ್ಟಿ ವಾಚಿಸಿದರು. ಕು ಭೂಮಿಕಾ ವಂದಿಸಿದರು. ಕು ಆಪ್ತ ರೈ ಹಾಗೂ ಅರ್ಪಿತಾ ರೈ ಕಾರ್ಯಕ್ರಮ ನಿರೂಪಿಸಿದರು.