ಕೇನ್ಯ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ

0

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಹಾಗೂ ವಿವಿಧ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆಗಳನ್ನು ಫ್ರೆಂಡ್ಸ್ ಕ್ಲಬ್ ಕೇನ್ಯ ಇದರ ಆಶ್ರಯದಲ್ಲಿ ಹಾಗೂ ಕೇನ್ಯಗುತ್ತು ರವೀಂದ್ರನಾಥ ಶೆಟ್ಟಿ ಯವರ ಸಹಕಾರದೊಂದಿಗೆ ಕೇನ್ಯ ವಿಷ್ಣು ನಗರದ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀಯುತ ಕೇನ್ಯ ರವೀಂದ್ರನಾಥ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ. ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ರೈ ಬಿರ್ಕಿ ಇವರನ್ನು ಕೇನ್ಯ ರವೀಂದ್ರನಾಥ ಶೆಟ್ಟಿ ಸನ್ಮಾನಿಸಿದರು. ಅತಿಥಿಗಳಾಗಿ ಕೇನ್ಯ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೇನ್ಯ ಗುತ್ತು ಗಿರಿನಾಥ ಶೆಟ್ಟಿ, ಬಳ್ಪ ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ, ಕೇನ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮಾ, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಉಪಸ್ಥಿತರಿದ್ದರು.


ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಮುಖ್ಯಸ್ಥರಾದ ಯಶವಂತ ರೈ ಸಮರೋಪ ಭಾಷಣ ಮಾಡಿದರು. ವೇದಿಕೆಯಲ್ಲಿ ಸ್ನೇಹಿತೆಯರ ಕೂಟದ ಅಧ್ಯಕ್ಷೆ ಶ್ರೀಮತಿ ಜ್ಯೋತಿ ವಿ ರೈ ಹಾಗೂ ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕ ಪವನ್ ಪಲ್ಲತ್ತಡ್ಕ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಸಮಾರೋಪದ ಸಮಾರಂಭದ ಅಧ್ಯಕ್ಷತೆಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ವಹಿಸಿದ್ದರು. ಈ ಸಂದರ್ಭದಲ್ಲಿ ಕೇನ್ಯಗುತ್ತು ರವೀಂದ್ರನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುಟಾಣಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಮಾಡಲಾಯಿತು.