ಅಕ್ಕೋಜಿಪಾಲ್: ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೋಜಿಪಾಲ್ ಇದರ ಆಶ್ರಯದಲ್ಲಿ 15 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಸೆ.1 ರಂದು ಅಕ್ಕೋಜಿಪಾಲ್ ಶಕ್ತಿನಗರ ಆಟದ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸ.ಹಿ.ಪ್ರಾ ಶಾಲೆ ಅಜ್ಜನಗದ್ದೆ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ನೀಲಮ್ಮ ದೀಪಬೆಳಗಿಸಿ ಉದ್ಘಾಟಿಸಿದರು.
ಕ್ಲಬ್ ನ ಕಾರ್ಯದರ್ಶಿ ಜಯದೀಪ್ ಕೊರತ್ಯಡ್ಕ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು, ಅಕ್ಕೋಜಿಪಾಲ್ ಕಾಲನಿಯ ಚಂಗ, ಕ್ಲಬ್ ನ ಕ್ರೀಡಾ ಕಾರ್ಯದರ್ಶಿ ಎಸ್.ಎನ್.ಮುರಳಿ ಕೊಪ್ಪತಡ್ಕ, ಉಪಸ್ಥಿತರಿದ್ದರು.
ಕುಮಾರಿ ಕೇತನ ಕೆ.ಎಸ್. ಪ್ರಾರ್ಥಿಸಿದರು.

ಮೊದಲಿಗೆ ಭಜನಾ ಕಾರ್ಯಕ್ರಮ ನಡೆಯಿತು.
ನಂತರ ಅಂಗನವಾಡಿ ಪುಟಾಣಿಗಳಿಗೆ ಕೃಷ್ಣ ವೇಷ, ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಸೈನಿಕರಾದ ಎನ್.ಬಿ.ಬಾಲಕೃಷ್ಣ ಗೌಡ ನಡುಗಲ್ಲು ರವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಿತು. ನವೀನ್ ಬಾಂಜಿಕೋಡಿ ಮತ್ತು ಚಿದಾನಂದ ಬಾಂಜಿಕೋಡಿ ಕಾರ್ಯಕ್ರಮ ನಿರೂಪಿಸಿದರು.