ಎಲಿಮಲೆ : ಬೀಳ್ಕೊಡುಗೆ ಸಮಾರಂಭ

0

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿದ್ದ ಸುಂದರ ಕೆ. ಇವರಿಗೆ ವರ್ಗಾವಣೆ ಯಾಗಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭವು ಆ.31ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಧನಂಜಯ ಬಾಳೆತೋಟ ವಹಿಸಿದ್ದರು. ಅಜ್ಜಾವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಿನಾಥ ಎಂ ಅಭಿನಂದನಾ ಭಾಷಣ ಮಾಡಿದರು.

ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಕಿರಣ್ ಗುಡ್ಡೆಮನೆ, ಎಸ್ ಡಿ ಎಂ ಸಿ ಸದಸ್ಯರಾದ ಪುರುಷೋತ್ತಮ ಸುಳ್ಳಿ, ಕೃಷ್ಣಪ್ಪ ಹರ್ಲಡ್ಕ, ಗೋವಿಂದ ಪಾರೆಮಜಲು, ಲೀಲಾವತಿ ಹರ್ಲಡ್ಕ, ವಿಶಾಲಾಕ್ಷಿ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ ಕಜೆ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ, ಶಾಲಾ ವಿದ್ಯಾರ್ಥಿ ನಾಯಕಿ ರಕ್ಷಿತಾ ಪಿ ಎಲ್ ಉಪಸ್ಥಿತರಿದ್ದರು.

ಈ ಸಂದರ್ಭ ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತದ್ದರು.

ಸುಂದರ ಕೆ ಇವರು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಅಕ್ಟೋಬರ್ 10, 2012 ರಿಂದ ಜುಲೈ 31, 2024 ವರೆಗೆ 12 ವರ್ಷಗಳ ಕಾಲ ಆಂಗ್ಲ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಬಿ ಆರ್ ಸಿ ಸುಳ್ಯ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.