ಸುದ್ದಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಭೇಟಿ

0

ಸುದ್ದಿ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಂದ ಗೌರವ

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಸೆ. 2 ರಂದು
ಸಂಜೆ ಸುದ್ದಿ ಬಿಡುಗಡೆ ಪತ್ರಿಕಾ ಕಚೇರಿಗೆ ಭೇಟಿ ನೀಡಿದರು.

ಸುದ್ದಿ ಬಿಡುಗಡೆ ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರವರು ಪುರುಷೋತ್ತಮ ಬಿಳಿಮಲೆಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಿದರು.

ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು, ರಂಗಮಯೂರಿಯ ಲೋಕೇಶ್ ಊರುಬೈಲು, ಸುದ್ದಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭ ಸುದ್ದಿ ಆಂದೋಲನದ ಭಾಗವಾದ ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನದ ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.

ಬಳಿಕ ಅಧ್ಯಕ್ಷರು ಸುದ್ದಿ ಚಾನೆಲ್ ಸಂದರ್ಶನದಲ್ಲಿ ಭಾಗಿಯಾದರು.