ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ

0

ಶಿಕ್ಷಕರ ದಿನಾಚರಣೆ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರ ಗುಂಡ ಕುಶಾಲಪ್ಪ ಗೌಡರನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಿ ಅವರ ಆಶೀರ್ವಾದ ಪಡೆಯಲಾಯಿತು.

ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರು ಗುರುವಂದನಾ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಕೋಶಾಧಿಕಾರಿ ಕೆ.ಟಿ. ವಿಶ್ವನಾಥ್, ಉಪಾಧ್ಯಕ್ಷೆ ಡಾ.ವೀಣಾ, ಮಾಜಿ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಗಿರೀಶ್, ಡಾ. ಹರ್ಷವರ್ಧನ್ ಮೊದಲಾದವರಿದ್ದರು.