ಕೆವಿಜಿ ಐಪಿಎಸ್ ನಲ್ಲಿ ಶಿಕ್ಷಕರ ದಿನಾಚರಣೆ

0

ಗೌರವಯುತ, ಜವಾಬ್ದಾರಿಯುತ ಶಿಕ್ಷಕರು ನಮ್ಮಲ್ಲಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿ : ಅರುಣ್ ಕುಮಾರ್

ಡಾ. ಸರ್ವಪಲ್ಲಿ ರಾಧಾಕೃಷ್ಣರ ಶ್ರಮ, ಆದರ್ಶ ಮತ್ತು ನೀತಿ ಶಾಸ್ತ್ರಗಳನ್ನು ನಾವು ಪಾಲಿಸೋಣ : ವಿದ್ಯಾರ್ಥಿ ನವೀನ್

  ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 





ಬಳಿಕ 10ನೇ ತರಗತಿಯ ವಿದ್ಯಾರ್ಥಿ ನವೀನ್ ರಾಧಾಕೃಷ್ಣನ್ ರವರ ಶ್ರಮ, ಆದರ್ಶ, ನೀತಿ ಶಾಸ್ತ್ರಗಳನ್ನು ನಾವೆಲ್ಲರೂ ಪಾಲಿಸೋಣ ಎಂದರು. ಹತ್ತನೇ ತರಗತಿಯ ವಿದ್ಯಾರ್ಥಿ ದ್ರುವ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಹೇಳಿದರು . ಶಿಕ್ಷಕರ ಮನೋರಂಜನೆಗಾಗಿ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಮತ್ತು ಮನೋರಂಜನಾತ್ಮಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಕಾರ್ಯಕ್ರಮಕ್ಕೆ ಕೆವಿಜಿ ಐಪಿಎಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಮತ್ತು ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ಹಾಕುವವರೇ ಶಿಕ್ಷಕರು. ವಿದ್ಯಾರ್ಥಿಗಳಲ್ಲಿ ಆದರ್ಶ ಗುಣವನ್ನು ಬೆಳೆಸಲು ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದು ಹೇಳಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಶಿಕ್ಷಕರೆಲ್ಲರೂ ಉತ್ತಮ ಶಿಕ್ಷಣ ಕೊಡುವಲ್ಲಿ ತಮ್ಮ ಕರ್ತವ್ಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಗೌರವಾಯುತ, ಜವಾಬ್ದಾರಿಯುತ ಶಿಕ್ಷಕರು ನಮ್ಮಲ್ಲಿದ್ದಾರೆ.

ಅವರ ಆದರ್ಶಗಳನ್ನು ಪಾಲಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭ ಹಾರೈಸಿದರು. ಹತ್ತನೇ ತರಗತಿಯ ರಿಮಾ ಫಾತಿಮಾ ಮತ್ತು ಯಶಸ್ವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.