ಬೆಳ್ಳಾರೆ: ಸ್ನೇಹಿತರ ಕಲಾ ಸಂಘದಿಂದ ಗುರುವಂದನಾ ಕಾರ್ಯಕ್ರಮ

0


ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮ ಸೆ. 5ರಂದು ನಡೆಯಿತು.


ನಿವೃತ್ತ ಶಿಕ್ಷಕ ತಂಟೆಪ್ಪಾಡಿ ಮೇದಪ್ಪ ಗೌಡ ಇವರಿಗೆ ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು, ಹಿತೈಷಿಗಳು ಗುರುಗಳ ಆಶೀರ್ವಾದವನ್ನು ಪಡೆದರು. ಸ್ನೇಹಿತರ ಕಲಾಸಂಘದ ಅಧ್ಯಕ್ಷ ಪದ್ಮನಾಭ ಬೀಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಸಂತ ಗೌಡ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವಾಧ್ಯಕ್ಷ ವಸಂತ ಉಲ್ಲಾಸ್ ಪಡ್ಪು ಗುರುವಂದನಾ ಪತ್ರವನ್ನು ವಾಚಿಸಿದರು. ಪೂರ್ವಾಧ್ಯಕ್ಷ ಸಂಜಯ್ ನೆಟ್ಟಾರು ಸ್ವಾಗತಿಸಿ, ಕೋಶಾಧಿಕಾರಿ ಶ್ರೀನಿವಾಸ ಕುರುಂಬುಡೇಲು ವಂದಿಸಿದರು. ಪೂರ್ವಾಧ್ಯಕ್ಷ ಕೊರಗಪ್ಪ ಕುರುಂಬುಡೇಲು ಕಾರ್ಯಕ್ರಮ ನಿರೂಪಿಸಿದರು.