ಉಬರಡ್ಕದಲ್ಲಿ ನಾಳೆಯಿಂದ ಸಾರ್ವಜನಿಕ ಗಣೇಶೋತ್ಸವ

0

ಶ್ರೀ ನರಸಿಂಹ ಶಾಸ್ತಾವು ದೇವಾಲಯ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಬರಡ್ಕ ಮಿತ್ತೂರು ಇದರ ವತಿಯಿಂದ 14 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಸೆ.7 ರಿಂದ 8 ರವರೆಗೆ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ನಡೆಯಲಿದೆ.

ಸೆ.7 ರಂದು ಪೂರ್ವಾಹ್ನ ಸ್ಥಳ ಶುದ್ಧಿ, ಗಣಪತಿ ಪ್ರತಿಷ್ಟೆ, ಭಜನೆ, ದೇವಾಲಯದಲ್ಲಿ ಸಾರ್ವಜನಿಕ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಊರಿನ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8 ರಿಂದ ದೀಪಾಂಜಲಿ ಮಹಿಳಾ ಮಂಡಳಿ ಶಾಂತಿನಗರ , ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈ ಮಡಿಯಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ಊರವರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಸೆ.8 ರಂದು ಬೆಳಿಗ್ಗೆ ಗಣಪತಿ ಹವನ, ಭಜನೆ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಬ್ಯಾಂಡು, ವಾಲಗ, ಸಿಡಿಮದ್ದುಗಳೊಂದಿಗೆ ಗಣೇಶನ ವೈಭವದ ಶೋಭಾಯಾತ್ರೆ ನಡೆದು ವಿಸರ್ಜನೆ ನಡೆಯಲಿದೆ.