ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಗಣೇಶೋತ್ಸವ ಆಚರಣೆ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಗಣೇಶೋತ್ಸವವು ಬೆಳಗ್ಗೆ ಅರ್ಚಕ ಅಭಿರಾಮ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹವನದೊಂದಿಗೆ ಆರಂಭಗೊಂಡಿತು.


ಬಳಿಕ ಸ್ಥಳೀಯ ಭಜಕ ವೃಂದದವರಿಂದ ಭಜನಾ ‌ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಅಧ್ಯಕ್ಷ ರತ್ನಾಕರ ರೈ ಅರಂಬೂರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಬಹುಮಾನ ವಿತರಿಸಲಾಯಿತು. ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಸಹಕರಿಸಿದರು.