ಕುಮಾರಧಾರ ನದಿ ಬದಿ ಹಾಗೂ ಕುಲ್ಕುಂದ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

0

ಸುಬ್ರಮಣ್ಯ ರೋಟರಿ ಕ್ಲಬ್ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಜಂಟಿಯಾಗಿ ಸೆ. 8 ರಂದು ಕುಮಾರಧಾರ ಹಾಗೂ ಕುಲ್ಕುoದ ರಸ್ತೆ ಬದಿಗಳಲ್ಲಿ ಇದ್ದ ತ್ಯಾಜ್ಯ ವಸ್ತುಗಳು ಕಸ ಕಡ್ಡಿಗಳು ಪ್ಲಾಸ್ಟಿಕ್ ಇತ್ಯಾದಿಗಳನ್ನು ಶೇಖರಿಸಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಸೀನಿಯರ್ ಚೇಂಬರ್ ಅಧ್ಯಕ್ಷ ಹಾಗೂ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು, ಅಯ್ಯಪ್ಪ ಗುರುಸ್ವಾಮಿ ದಾಮೋದರ್ ಸಮಾಜ ಸೇವಾ ಟ್ರಸ್ಟ್ ನ ನಾಯಕರುಗಳು ಹಾಗೂ ಸದಸ್ಯರುಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.