ಪಂಜ ದೇಗುಲಕ್ಕೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ,ಡಾ.ಆರ್ ಕೆ ನಾಯರ್ ಭೇಟಿ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಸೆ.8. ರಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಖ್ಯಾತ ಪರಿಸರ ತಜ್ಞ ಡಾ.ಆರ್ ಕೆ ನಾಯರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಅವರನ್ನು ಶಾಲು ಹೊದಿಸಿ ಸ್ವಾಗತಿಸಿದರು.

ಈ ವೇಳೆ ಶ್ರೀಮತಿ ಪುಷ್ಪ ಡಿ ಪ್ರಸಾದ್ ಕಾನತ್ತೂರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ ಮೊದಲಾದವರು ಉಪಸ್ಥಿತರಿದ್ದರು.