ಮೇದಿನಡ್ಕದಲ್ಲಿ ಸಂಭ್ರಮದ ಗಣೇಶ ಚತುರ್ಥಿ ಆಚರಣೆ

0

ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಆಡಳಿತ ಸಮಿತಿ ಹಾಗೂ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಶ್ರೀಗಣೇಶ ಚತುರ್ಥಿ ಪ್ರಯುಕ್ತ ಸ್ಥಳೀಯ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕ ಬಂಧುಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಮೋಹನ್ ನಂಗಾರು ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಯೋಗರಾಜ್, ಅಧ್ಯಕ್ಷ ನಾಚಿ ಮುತ್ತು, ಹಿರಿಯರಾದ ದಯಾಳನ್ ಮೇದಿನಡ್ಕ, ಶ್ರೀ ರಾಮ ಭಜನಾ ಮಂದಿರ ಮೇದಿನಡ್ಕ, ಇದರ ಅಧ್ಯಕ್ಷ ಪೊನ್ನುದೊರೆ, ವಿನೋದ್ ಮೇದಿನಡ್ಕ, ಸ್ಥಳೀಯರಾದ ದಿನೇಶ್ ನಾಂಗುಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕ ಬಂಧುಗಳಿಗೆ ಈ ಸಂದರ್ಭದಲ್ಲಿ ವಿವಿಧ ಆಟದ ಸ್ಪರ್ಧೆಗಳನ್ನು ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು ,ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ, ಕರ್ಲಪ್ಪಾಡಿ ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯರಾದ ಸತ್ಯಶೀಲನ್, ಭಾಸ್ಕರ, ಶ್ರೀಮತಿ ರೇಖಾ, ಶ್ರೀಮತಿ ಪ್ರಜ್ಞಾ ರಾಜೇಶ್ ಮೇನಾಲ ಉಪಸ್ಥಿತಿರಿದ್ದರು . ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು , ಬೆಳಗ್ಗೆಯಿಂದ ಸಂಜೆ ತನಕ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹೀತ ಭಕ್ತಾದಿಗಳಿಗೆಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು