ಸುದ್ದಿ ಬಿಡುಗಡೆ ಮತ್ತು ಷರಾ ಪ್ರಕಾಶನದ ಆಶ್ರಯದಲ್ಲಿ ದೇಶ ಭಕ್ತಿ ‌ಗಾಯನ ಸ್ಪರ್ಧೆ ಪ್ರಥಮ ಸ್ಥಾನ ಪಡೆದ ಎನ್.ಎಂ.ಸಿ. ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ಸುಳ್ಯ‌ ಮತ್ತು ಷರಾ ಪ್ರಕಾಶನ‌ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ “ದೇಶ ಭಕ್ತಿ ಗೀತೆ ಗಾಯನ” ಸ್ಪರ್ಧೆಯಲ್ಲಿ ಪ.ಪೂ ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸುಳ್ಯದ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೆ. 9ರಂದು ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ‌ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಸುದ್ದಿ ಬಿಡುಗಡೆಯ ವರದಿಗಾರ ಈಶ್ವರ ವಾರಣಾಶಿ ಸ್ಪರ್ಧೆಯ ಆಯೋಜನೆಯ ಬಗ್ಗೆ ಮಾತನಾಡಿದರು. ಸ್ಪರ್ಧಾ ಸಂಯೋಜಕ ದಯಾನಂದ ಕೊರತ್ತೋಡಿ ವಿಜೇತರ ಪಟ್ಟಿ ವಾಚಿಸಿದರು. ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ ಪೂಜಾಶ್ರೀ
ವಿತೇಶ್ ಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ‌ಉಪನ್ಯಾಸಕಿ ಗೀತಾ ಎನ್ ವಂದಿಸಿದರು.‌ ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.