ಬೆಳ್ಳಾರೆ ಜ್ಞಾನದೀಪದಲ್ಲಿ ದಿ.ಗಂಗಾಧರ ಬೆಳ್ಳಾರೆ ಸ್ಮರಾಣಾರ್ಥ ತರಬೇತು ಕಾರ್ಯಕ್ರಮ

0


ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹದ ಅಂಗವಾಗಿ ಖ್ಯಾತ ಮನೋವಿಶ್ಲೇಷಕ ದಿ.ಗಂಗಾಧರ ಬೆಳ್ಳಾರೆ ಸ್ಮರಣಾರ್ಥ ತರಬೇತು ಕಾರ್ಯಕ್ರಮ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಗಂಗಾಧರ ಬೆಳ್ಳಾರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ರೈ ಬಜನಿ, ಬೆಳ್ಳಾರೆ ಝಾಕಾರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಬೆಳ್ಳಾರೆ, ಬೆಳ್ಳಾರೆ ಜೇಸಿಐ ಪೂರ್ವಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಜಪಿಲ, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಆನಂದ ಉಮಿಕ್ಕಳ ವಂದಿಸಿದರು. ಪೂರ್ವಾಧ್ಯಕ್ಷ ಪದ್ಮನಾಭ ಕಲಾಸುಮ ಸಹಕರಿಸಿದರು.

ವರದಿ : ಉಮೇಶ್ ಮಣಿಕ್ಕಾರ