ಚೆಂಬು ಗ್ರಾ.ಪಂ.ಗೆ ಸಂಸದ ಯದುವೀರ್ ಒಡೆಯರ್ ಭೇಟಿ

0

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚೆಂಬು ಗ್ರಾಮ ಪಂಚಾಯತ್ ಗೆ ಸೆ.9ರಂದು ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಗ್ರಾ.ಪಂ. ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಅವರ ನೇತೃತ್ವದಲ್ಲಿ ಗ್ರಾಮಸ್ಥರ ಬೇಡಿಕೆ ಹಾಗೂ ಈಡೇರಿಕೆಗೆ ಗ್ರಾಮಸ್ಥರ ಸಹಿ ಇರುವ ಪತ್ರದ ಮನವಿಯನ್ನು ಈ ವೇಳೆ ಸಂಸದರಿಗೆ ಸಲ್ಲಿಸಲಾಯಿತು.

ಮುಖ್ಯವಾಗಿ ಚೆಂಬು ಗ್ರಾಮದಲ್ಲಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸ್ಥಳದಲ್ಲಿದ್ದ ಬಿ.ಎಸ್.ಎನ್.ಎಲ್. ದೂರವಾಣಿ ಇಲಾಖೆಯ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.


ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮದ ಊರುಬೈಲು,ಆನ್ಯಾಳ, ದಬ್ಬಡ್ಕ ಭಾಗದಲ್ಲಿ ಪಂಚಾಯತ್ ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ, ಚೆಂಬು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ದಿನೇಶ್ ಸಣ್ಣಮನೆ ಪಂಚಾಯತ್ ಸದಸ್ಯ ರಮೇಶ್ ಹುಲ್ಲು ಬೆಂಕಿ, ವಸಂತ ಎನ್.ಟಿ. ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಮಂಡಲ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಬಿಜೆಪಿಯ ವಿವಿಧ ಮೂರ್ಚಾ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.