ಸುದ್ದಿ ಬಿಡುಗಡೆ ಮತ್ತು ಷರಾ ಪ್ರಕಾಶನದ ಆಶ್ರಯದಲ್ಲಿ ದೇಶ ಭಕ್ತಿ ‌ಗಾಯನ ಸ್ಪರ್ಧೆ

0

ಐವರ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಸುದ್ದಿ ಸಮೂಹ ಸಂಸ್ಥೆ ಸುಳ್ಯ‌ ಮತ್ತು ಷರಾ ಪ್ರಕಾಶನ‌ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ “ದೇಶ ಭಕ್ತಿ ಗೀತೆ ಗಾಯನ” ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ ಐವರ್ನಾಡು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೆ. 11 ರಂದು ನಡೆಯಿತು. ‌
ಸಂಸ್ಥೆಯ ಪ್ರಾಂಶುಪಾಲರಾದ ಇಸಾಕ್ ಮತ್ತು ಶಿಕ್ಷಕ ನಾರಾಯಣ ಬಹುಮಾನ ವಿತರಿಸಿದರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಸುದ್ದಿ ಬಿಡುಗಡೆಯ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ವರದಿಗಾರ ರಮೇಶ್ ನೀರಬಿದಿರೆ, ಅಕೌಂಟೆಂಟ್ ರೇಖಾ ಸುಭಾಸ್
,ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.