ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಉಪನ್ಯಾಸಕಿ ಸುನಂದ ಪೂಜಾರಿ ಮೃತ್ಯು

0

ಸುಳ್ಯದ ಬೀರಮಂಗಲ ನಿವಾಸಿ, ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು, ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ.ಅಚ್ಚುತ ಪೂಜಾರಿಯವರ ಪತ್ನಿ ಮಾಡಾವು ಜ್ಯೂನಿಯರ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಶ್ರೀಮತಿ ಸುನಂದ ಅಚ್ಚುತ ಪೂಜಾರಿಯವರು ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೆಲದಿನಗಳ ಹಿಂದೆ ಬೈಕಿಂದ ಬಿದ್ದು ತೀವ್ರ ಜಖಂಗೊಂಡಿದ್ದರು.

ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಏಟಾಯಿತೆಂದೂ, ಮಂಗಳೂರಿನ ಆಸ್ಪತ್ರೆಯಲ್ಲಿ ಆಪರೇಶನ್ ಆಗಿದ್ದರೂ ಫಲಕಾರಿಯಾಗದೆ ನಿನ್ನೆ ರಾತ್ರಿ ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.


ಮೃತರು ಐವರ್ನಾಡು ಸಾರಕೆರೆಯವರಾಗಿದ್ದು, ನವೀನ್ ಸಾರಕೆರೆಯವರ ತಂಗಿ.
ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.