ಬೆಳ್ಳಾರೆಯಲ್ಲಿ ಚಿಣ್ಣರ ಚಿಲಿಪಿಲಿ

0

ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು.

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ ಬೆಳ್ಳಾರೆ, ಚಿತ್ರಕಲಾವಿದ ಪದ್ಮನಾಭ ಕಲಾಸುಮ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಬೇತಿ ನೀಡಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅಧ್ಯಕ್ಷತೆ ವಹಿಸಿದ್ದರು.

ಬೆಳ್ಳಾರೆ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಶಮಿತಾ ಪಿ. ರೈ, ಚೇತನಾ ಕಿಶನ್ ಮುರುಳ್ಯ, ಪೂರ್ವಾಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಜಪಿಲ ಉಪಸ್ಥಿತರಿದ್ದರು. ಪೂರ್ಣಿಮಾ ಮೊಗಪ್ಪೆ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರ್ವಹಿಸಿದರು. ಪೆರುವಾಜೆ, ಅಯ್ಯನಕಟ್ಟೆ ಮತ್ತು ದರ್ಖಾಸ್ತು ಶಾಲೆಯ 60ಕ್ಕೂ ಅಧಿಕ ಮಕ್ಕಳು ಶಿಬಿರದ ಪ್ರಯೋಜನ ಪಡೆದರು.
(ವರದಿ : ಉಮೇಶ್ ಮಣಿಕ್ಕಾರ
)