ಸುದ್ದಿ ಬಿಡುಗಡೆ ಮತ್ತು ಷರಾ ಪ್ರಕಾಶನದ ಆಶ್ರಯದಲ್ಲಿ ದೇಶ ಭಕ್ತಿ ‌ಗಾಯನ ಸ್ಪರ್ಧೆ

0

ಸುದ್ದಿ ಸಮೂಹ ಸಂಸ್ಥೆ ಸುಳ್ಯ‌ ಮತ್ತು ಷರಾ ಪ್ರಕಾಶನ‌ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ “ದೇಶ ಭಕ್ತಿ ಗೀತೆ ಗಾಯನ” ಸ್ಪರ್ಧೆಯಲ್ಲಿ ಭಾಗವಹಿಸುದ ಮುರುಳ್ಯ ಶಾಂತಿನಗರ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸೆ. 12ರಂದು ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾ ವಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ದಿ ಬಿಡುಗಡೆಯ ವರದಿಗಾರ ಈಶ್ವರ ವಾರಣಾಶಿ ಸ್ಪರ್ಧೆಯ ಆಯೋಜನೆಯ ಬಗ್ಗೆ ಮಾತನಾಡಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ನಡುಬೈಲು, ಸಹ ಶಿಕ್ಷಕರಾದ ಉಷಾ, ಹರ್ಷಿತಾ, ಲಕ್ಷೀತ, ಸುಚಿತ್ರ, ಶಾಲಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಭಾಗವಹಿಸಿದ
ವಿದ್ಯಾರ್ಥಿಗಳಾದ ತೃಪ್ತಿ, ದಿಶಾಡಿಂಪಲ್, ಸಹನ್ಯ, ತನ್ವಿ, ಚಾರ್ಮಿ, ನಿರೀಕ್ಷಾ ಪಿ ಪ್ರಮಾಣ ಪತ್ರ ಸ್ವೀಕರಿಸಿದರು.