ಸೆ.22 : ಬೆಳ್ಳಾರೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ,ಗುರುಪೂಜೆ,ಪ್ರತಿಭಾ ಪುರಸ್ಕಾರ ಸನ್ಮಾನ

0

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ,ಯುವವಾಹಿನಿ ಸುಳ್ಯ ಘಟಕ ವತಿಯಿಂದ 170 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ,ಗುರುಪೂಜೆ,ಪ್ರತಿಭಾ ಪುರಸ್ಕಾರ ,ಸನ್ಮಾನ ಕಾರ್ಯಕ್ರಮವು ಸೆ.22 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಪುರೋಹಿತರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8.30 ರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ನಂತರ ಗುರುಪೂಜೆ ನಡೆಯಲಿದೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿಜಯ ಕರ್ನಾಟಕ ಜಿಲ್ಲಾ ವರದಿಗಾರರಾದ ಸಂತೋಷ್ ಮರಕ್ಕಡ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಅತಿಥಿಗಳಾಗಿ ಬೆಳ್ಳಾರೆ ಡಿಸಿಸಿ ಬ್ಯಾಂಕ್ ಶಾಖಾಧಿಕಾರಿ ಸಂತೋಷ್ ಮರಕ್ಕಡ,ಬಿಲ್ಲವ ಸಂಘ ಸ್ಥಾಪಕಾಧ್ಯಕ್ಷ ಜನಾರ್ಧನ ಪೂಜಾರಿ ಅಲೆಕ್ಕಾಡಿ,ಜ್ಞಾನ ದೀಪ ಶಿಕ್ಷಣ ಸಂಸ್ಥೆಯ ಸಂಚಾಲಕ ಉಮೇಶ ಮಣಿಕ್ಕಾರ ಉಪಸ್ಥಿತರಿರುವರು.
ಸನ್ಮಾನ
ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಮೇಶ ಪೂಜಾರಿ ಜಯನಗರ,ಯಕ್ಷಗಾನ ಕಲಾವಿದ ಗುಡ್ಡಪ್ಪ ಸುವರ್ಣ ಪಂಜ,ಉದ್ಯಮಿ ಸಂತೋಷ್ ಕುಮಾರ್ ಅಲೆಕ್ಕಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಲೋಕೇಶ ಪೂಜಾರಿ ಮಣಿಮಜಲು, ಕ್ರೀಡಾ ಕ್ಷೇತ್ರದಲ್ಲಿ ಕೌಶಿಕ್ ಕಕ್ಕೆಪದವು,ಚಿತ್ರ ಕಲಾವಿದ ಜಿತೇಶ್ ಪೆರುವಾಜೆ ಯವರನ್ನು ಸನ್ಮಾನಿಸಲಾಗುವುದು.
ಗೌರವಾರ್ಪಣೆ
ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ,ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಕೆ.ವಿ, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಭಾಸ್ಕರ ಪೂಜಾರಿ ಬಾಜಿನಡ್ಕ ,ಮಹಿಳಾ ಅಟೋ ಚಾಲಕರಾದ ಶ್ರೀಮತಿ ಗೀತಾ ತಡಗಜೆಯವರಿಗೆ ಗೌರವಾರ್ಪಣೆ ನಡೆಯಲಿದೆ.
ಬಳಿಕ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 90 ಕ್ಕಿಂತ ಹೆಚ್ವು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.