ಸುಳ್ಯ ಯುವಜನ ಸಂಯುಕ್ತ ಮಂಡಳಿ ಮಹಾಸಭೆ

0

ಕ್ರಿಯಾಶೀಲ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ

ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯು ಸೆ.೧೪ರಂದು ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಿತು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಎ.ಎಂ. ಅಧ್ಯಕ್ಷತೆ ವಹಿಸಿದ್ದರು. ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯರವರು ಕ್ರಿಯಾಶೀಲ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಸಾಮಾಗ್ರಿ ವಿತರಿಸಿದರು.


ಯುವಜನ ಸಂಯುಕ್ತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ ಮುತ್ಲಾಜೆ ಪ್ರತಿಜ್ಞಾ ವಿಧಿ ಭೋದಿಸಿದರು. ಗೌರವಾಧ್ಯಕ್ಷ ತೇಜಸ್ವಿ ಕಡಪಳ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.


ಗೌರವ : ಶಾಸಕಿ ಭಾಗೀರಥಿ ಮುರುಳ್ಯರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಅತ್ಯುತ್ತಮ ನಿರ್ದೇಶಕರಾಗಿ ಆಯ್ಕೆಯಾದ ಲೋಹಿತ್ ಬಾಳಿಕಳರನ್ನು ಗೌರವಿಸಲಾಯಿತು.


ಯುವಜನ ಸಂಯುಕ್ತ ಮಂಡಳಿ ಕಾರ್ಯದರ್ಶಿ ಗುರುರಾಜ್ ಅಜ್ಜಾವರ ಸ್ವಾಗತಿಸಿದರು. ಕೋಶಾಧಿಕಾರಿ ದಯಾನಂದ ಪಾತಿಕಲ್ಲು ಲೆಕ್ಕಪತ್ರ ಮಂಡಿಸಿದರು. ನಿರ್ದೇಶಕ ಸುಬ್ರಹ್ಮಣ್ಯ ಪಿ.ಬಿ. ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿಯ ಪಟ್ಟಿ ವಾಚಿಸಿದರು. ನಿರ್ದೇಶಕ ಮುರಳಿ ನಳಿಯಾರು ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯ ನಡೆಸಿದರು. ನೂತನ ಕಾರ್ಯದರ್ಶಿ ನಮಿತ ಬಿ.ವಿ. ವಂದಿಸಿದರು.