ಕಬಡ್ಡಿಯಲ್ಲಿ ಜ್ಞಾನದೀಪ ಶಾಲಾ ವಿದ್ಯಾರ್ಥಿನಿ ತೃಷಾ. ಕೆ. ಎಚ್.ರಾಷ್ಟ್ರಮಟ್ಟಕ್ಕೆ

0

ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿ ತೃಷಾ ಕೆ.ಎಚ್.,ಎಂಟನೇ ತರಗತಿ ವಿದ್ಯಾ ಭಾರತಿಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ಶಾಲೆ ಆಲಂಕಾರ್ ತಂಡದಲ್ಲಿದಲ್ಲಿ ಆಯ್ಕೆಗೊಂಡು, ಆಂಧ್ರಪ್ರದೇಶದ ವಿಜಯವಾಡದ ಗುಂಟೂರ್ ನಲ್ಲಿ ನಡೆದ ದಕ್ಷಿಣ ಮಧ್ಯ ಕ್ಷೇತ್ರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿಯೂ ಪ್ರಥಮ ಸ್ಥಾನ ಗಳಿಸಿ ಎಲಿಮಲೆ ಗೆ ಆಗಮಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯಿಂದ ಶಿಕ್ಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ಅದ್ದೂರಿಯಾಗಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ಈಕೆ ಅಕ್ಟೋಬರ್ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿದ್ಯಾಭಾರತಿಯ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಲಿದ್ದಾಳೆ.

ಇವಳು ಹರೀಶ್ ಕಂಜಿಪಿಲಿ ಹಾಗೂ ಶ್ವೇತಾ ಕಂಜಿಪಿಲಿ ಇವರ ಪುತ್ರಿ.