ಕೊಡಗು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಪೆರಾಜೆಯ ಪ್ರದೀಪ ಕೆ.ಎಂ. ನೇಮಕ

0

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗ ಮೋರ್ಚಾದ ಕೊಡಗು ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ಪೆರಾಜೆಯ ಪ್ರದೀಪ ಕೆ.ಎಂ. ನೇಮಕಗೊಂಡಿದ್ದಾರೆ.
ಸೆ.೧೩ ರಂದು ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರರವರ ಅನುಮೋದನೆ ಮೇರೆಗೆ ಆಯ್ಕೆ ಮಾಡಲಾಯಿತು.
ಪೆರಾಜೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾಗಿರುವ ಪ್ರದೀಪರವರು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಉಪಾಧ್ಯಕ್ಷರಾಗಿದ್ದಾರೆ.
ಇವರು ಈ ಹಿಂದೆ ತಾಲೂಕು ಓಬಿಸಿ ಮೋರ್ಚಾದ ಸದಸ್ಯರಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.