ಸರಕಾರಿ ನೌಕರರ ಅಧ್ಯಕ್ಷರಾಗಿ ಶ್ತೀಮತಿ ಧನಲಕ್ಷ್ಮೀ ಕುದ್ಪಾಜೆ ಆಯ್ಕೆ

0

ಕರ್ನಾಟಕ ರಾಜ್ಯ ಸರಕಾರಿ‌ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರು ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ. ಸರ್ವೆಯರ್ ಸಿಂಗಾರ ಶೆಟ್ಟಿಯವರು ಸುಳ್ಯದಿಂದ ವರ್ಗಾವಣೆಗೊಂಡಿರುವುದರಿಂದ ಅಧ್ಯಕ್ಷ ಸ್ಥಾನವನ್ನು, ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರಿಗೆ ಪ್ರಭಾರ ವಹಿಸಲಾಗಿದೆ. ಆ ಮೂಲಕ ಪ್ರಥಮ ಮಹಿಳಾ ಅಧ್ಯಕ್ಷರೆಂಬ ಹಿರಿಮೆಗೂ ಇವರು ಪಾತ್ರರಾಗಿದ್ದಾರೆ.

ಸಂಘದ ಕಚೇರಿಯಲ್ಲಿ ‌ನಡೆದ ಕಾರ್ಯಕಾರಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.

ಧನಲಕ್ಷ್ಮೀ ಕುದ್ಪಾಜೆಯವರು ಅಡ್ಪಂಗಾಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾಗಿದ್ದು, ಸುಳ್ಯದಲ್ಲಿ ಶಿಕ್ಷಣ ಸಂಯೋಜಕರಾಗಿಯೂ ಪ್ರಭಾರದಲ್ಲಿದ್ದಾರೆ.

ಇವರು ಸುಳ್ಯ ಎನ್ನೆಂಸಿ ಉಪನ್ಯಾಸಕ ಸಂಜೀವ ಕುದ್ಪಾಜೆಯವರ ಪತ್ನಿ.