ಪಂಜ: ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಅ.12: ವಿಜೃಂಭಣೆಯ ಶ್ರೀ ಶಾರದೋತ್ಸವ

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ -2024 ಇದರ ವತಿಯಿಂದ ಪಂಜದ ನಾಡ ಹಬ್ಬ 15ನೇ ವರುಷದ ಶ್ರೀ ಶಾರದೋತ್ಸವ ಅ.12 ರಂದು ವಿಜೃಂಭಣೆಯಿಂದ ಜರುಗಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.20 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ರವರು ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಶಾರದೋತ್ಸವ ಸಮಿತಿ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ ಸಭಾಧ್ಯಕ್ಷತೆ ವಹಿಸಿದ್ದರು.

ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿ ಗುರುಪ್ರಸಾದ್ ತೋಟ, ಕೋಶಾಧಿಕಾರಿ ಲೋಕೇಶ್ ಬರೆಮೇಲು, ಶಾರದೋತ್ಸವ ಸಮಿತಿ ಉಪಾಧ್ಯಕ್ಷ ದಾಮೋದರ ಪಲ್ಲೋಡಿ, ಕಾರ್ಯದರ್ಶಿ ದಿನೇಶ್ ಪಂಜದಬೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಲೋಕೇಶ್ ಬರೆಮೇಲು ಸ್ವಾಗತಿಸಿದರು. ಗುರು ಪ್ರಸಾದ್ ತೋಟ ನಿರೂಪಿಸಿದರು. ದಿನೇಶ್ ಪಂಜದಬೈಲು ವಂದಿಸಿದರು.ವಿವಿಧ ಸಂಚಾಲಕರು, ಸದಸ್ಯರು ಪಾಲ್ಗೊಂಡಿದ್ದರು.