ಸುಬ್ರಹ್ಮಣ್ಯ: ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟ

0

ಮಂಗಳೂರು ನಗರ ಮತ್ತು ಪುತ್ತೂರು ತಾಲೂಕು ಚಾಂಪಿಯನ್

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸೆ.17 ರಂದು ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಮಂಗಳೂರು ನಗರ ಮತ್ತು ಪುತ್ತೂರು ತಾಲೂಕು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

ಬಾಲಕರ ವಿಭಾಗದಲ್ಲಿ ಮಂಗಳೂರು ನಗರ ತಾಲೂಕನ್ನು ಪ್ರತಿನಿಧಿಸುವ ಸೈಂಟ್ ಅಲೋಷಿಯಸ್ ಕಾಲೇಜು ಮಂಗಳೂರು ಮತ್ತು ಬೆಳ್ತಂಗಡಿಯನ್ನು ಪ್ರತಿನಿಧಿಸುವ ವಾಣಿ ಪದವಿಪೂರ್ವ ಕಾಲೇಜುಗಳ ನಡುವೆ ಜಿದ್ದಾ ಜಿದ್ದಿನ ಪೈನಲ್ ಪಂದ್ಯಾಟ ನಡೆಯಿತು. ಅಂತಿಮ ಹಣಾಹಣೆಯಲ್ಲಿ ಅಲೋಷಿಯಸ್ ತಂಡವು ವಾಣಿ ಪದವಿಪೂರ್ವ ಕಾಲೇಜು ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಬೆಳ್ತಂಗಡಿ ತಂಡವು ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗ:

ಬಾಲಕಿಯರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸುವ ಅಂಬಿಕಾ ಪದವಿಪೂರ್ವ ಕಾಲೇಜು ಪುತ್ತೂರು ಮತ್ತು ಬೆಳ್ತಂಗಡಿಯನ್ನು ಪ್ರತಿನಿಧಿಸುವ ವಾಣಿ ಪದವಿಪೂರ್ವ ಕಾಲೇಜುಗಳ ನಡುವೆ ಪೈನಲ್ ಹಣಾಹಣೆಯಲ್ಲಿ ಅಂಬಿಕಾ ಪ.ಪೂ ತಂಡವು ವಾಣಿ ಪದವಿಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯಿತು.

ಉದ್ಘಾಟನಾ ಕಾರ್ಯಕ್ರಮ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.ಕ್ರೀಡಾ ಕ್ಷೇತ್ರವು ಇದೀಗ ಅತ್ಯಂತ ಶ್ರೇಷ್ಠ ಸ್ಥಾನವನ್ನು ಗಳಿಸಿದೆ.ಕ್ರೀಡಾಸ್ಪೂರ್ತಿಯಿಂದ ಪಂದ್ಯಾಟದಲ್ಲಿ ಭಾಗವಹಿಸಿ ಶ್ರೇಷ್ಠತೆ ಸಂಪಾದಿಸಿ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ
ಜಯಣ್ಣ ಸಿ.ಡಿ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್‌.ಎಲ್ , ವಿದ್ಯಾಲಯಗಳ ನಿರ್ವಾಹಕ ಮತ್ತು ಕುಕ್ಕೆ ದೇವಳದ ಸಿಬ್ಬಂದಿ ಶಿವಸುಬ್ರಹ್ಮಣ್ಯ ಭಟ್, ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್. ಆರ್, ಕ್ರೀಡಾ ಸಂಯೋಜಕಿ ಜ್ಯೋತಿ. ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಎಚ್.ಎಸ್ ವೇದಿಕೆಯಲ್ಲಿದ್ದರು.

ಬಹುಮಾನ ವಿತರಣೆ

ವಿಜೇತರಿಗೆ ಬಹುಮಾನವನ್ನು ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಧನಂಜಯ ಕಲ್ಲಾಜೆ, ಉಪಾಧ್ಯಕ್ಷ ವೆಂಕಟೇಶ್.ಎಚ್.ಎಲ್, ಸದಸ್ಯೆ ಭಾರತಿ ದಿನೇಶ್, ಪ್ರಾಚಾರ್ಯ ಸೋಮಶೇಖರ ನಾಯಕ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಶಿಕ್ಷಕ-ರಕ್ಷಕ ಸಂಘದ ಸದಸ್ಯೆ ತ್ರಿವೇಣಿ ದಾಮ್ಲೆ, ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ಅತ್ಯುತ್ತಮ ಕಡತ ನಿರ್ವಹಣೆ ಮಾಡಿದ ಉಪನ್ಯಾಸಕ ಜಯಪ್ರಕಾಶ್ ರವೀಂದ್ರನ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಕ್ರೀಡಾ ಸಂಯೋಜಕಿ ಜ್ಯೋತಿ.ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಎಚ್.ಎಸ್, ವಿದ್ಯಾರ್ಥಿ ನಾಯಕ ಗಗನ್ ಡಿ.ಕೆ, ಸಿಬ್ಬಂದಿ ಮಹೇಶ್ ಕೆ.ಎಚ್ ಬಹುಮಾನ ವಿತರಿಸಿದರು.ಉಪನ್ಯಾಸಕ ರತ್ನಾಕರ.ಎಸ್ ಸ್ವಾಗತಿಸಿದರು.ಉಪನ್ಯಾಸಕಿ ಶ್ರುತಿ ಯಾಲದಾಳು ನಿರೂಪಿಸಿದರು.