ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ

0

ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ದುರ್ಗಾಂಬ ಪದವಿಪೂರ್ವ ಕಾಲೇಜು ಆಲಂಕಾರ್ ಚಾಂಪಿಯನ್

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೆ.20 ರಂದು ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ಎಸ್ ನಾಯಕ್ ದೀಪ ಬೆಳಗಿಸಿ ನೆರವೇರಿಸಿದರು. ಸಮಾರಂಭದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ,ಸಂಚಾಲಕರಾದ ಚಂದ್ರಶೇಖರ್ ನಾಯರ್ ,ಕಡಬ ತಾಲೂಕಿನ ಕ್ರೀಡಾ ಸಂಯೋಜಕರಾದ ರಾಧಾಕೃಷ್ಣ ,ಸವಣೂರು ವಿದ್ಯಾ ರಶ್ಮಿ ಪದವಿ ಪೂರ್ವ ಕಾಲೇಜಿನ ದೈಹಿಕ ನಿರ್ದೇಶಕರಾದ ಶಿವಪ್ರಸಾದ್ ಆಳ್ವ, ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್ ,ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಉಪಸ್ಥಿತರಿದ್ದರು.

ಫಲಿತಾಂಶ
ಬಾಲಕರ ವಿಭಾಗದಲ್ಲಿ
ಪ್ರಥಮ ಸ್ಥಾನವನ್ನು ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ,
ದ್ವಿತೀಯ ಸ್ಥಾನವನ್ನು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು, ರಾಮಕುಂಜ .
ಬಾಲಕಿಯರ ವಿಭಾಗ
ಪ್ರಥಮ ಸ್ಥಾನವನ್ನು ದುರ್ಗಾಂಬ ಪದವಿಪೂರ್ವ ಕಾಲೇಜು ಆಲಂಕಾರ್,
ದ್ವಿತೀಯ ಸ್ಥಾನವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಪಡೆಯಿತು.