ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮಹಾಸಭೆ

0

ದೇವಳದ ಅಭಿವೃದ್ಧಿ ಕೆಲಸ ಕಾರ್ಯಗಳ ಕುರಿತು ಚರ್ಚೆ

ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮಹಾಸಭೆಯು ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸೆ.22ರಂದು ಜರುಗಿತು.

ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಜಯಕುಮಾರ್ ಚೆದ್ಕಾರ್ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ದೇವಸ್ಥಾನಕ್ಕೆ ನೂತನ ಅರ್ಚಕರ ನೇಮಕಗೊಳಿಸುವ ಕುರಿತಂತೆ ಚರ್ಚಿಸಲಾಯಿತು. ಜೊತೆಗೆ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದ ಆರ್.ಟಿ.ಸಿ. ಆಗದ ಬಗ್ಗೆ ಚರ್ಚಿಸಲಾಯಿತು.

ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯ ಪ್ರಾರಂಭಗೊಳಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಎಂ.ಬಿ. ಸದಾಶಿವ, ಕಾರ್ಯದರ್ಶಿ ಕೇಶವ ಚೌಟಾಜೆ, ಖಜಾಂಜಿ ಲೋಹಿತ್ ಹೊದ್ದೆಟ್ಟಿ, ಗೋಪಾಲಕೃಷ್ಣ ಭಟ್ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.