ಹಿಂದೂ ಸಂಘಟನೆ ಯುವಕರ ಬಂಧನ

0

ಪರಿವಾರ ಸಂಘಟನೆಗಳ ಆಕ್ರೋಶ – ಪ್ರತಿಭಟನೆಗೆ ನಿರ್ಧಾರ

ಅನ್ಯಮತೀಯ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಸಂಘಟನೆಯ ಇಬ್ಬರನ್ನು ಬಂಧಿಸಿರುವ ಪೋಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಪರಿವಾರ ಸಂಘಟನೆಯು ಪೋಲೀಸರ ಕ್ರಮದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿದೆ.


ಹಿಂದೂ ಯುವಕರ ಮೇಲೆ ಸುಳ್ಳು ಕೇಸು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ ಸಂಘಟನೆಯರು, ಇಂದು ಬೆಳಿಗ್ಗೆ 9.30 ಕ್ಕೆ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಮಾಡಿ, ಬಳಿಕ ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.