ಶಿಕ್ಷಕರಿಂದ ಮಾತ್ರ ಉತ್ತಮ ನಾಯಕನ ಸೃಷ್ಟಿ ಸಾಧ್ಯ : ಸವಿತಾರ ಮುಡೂರು

0

ಬೆಳ್ಳಾರೆ ಜ್ಞಾನದೀಪದಲ್ಲಿ ಪರಿಣಾಮಕಾರಿ ನಾಯಕತ್ವ ತರಬೇತಿ

ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣವಿರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟು ಸಮಾಜದ ಉತ್ತಮ ನಾಯಕರನ್ನಾಗಿ ರೂಪಿಸುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಜೇಸಿಐ ವಲಯ ತರಬೇತುದಾರ ಸವಿತಾರ ಮುಡೂರು ಹೇಳಿದರು. ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಪರಿಣಾಮಕಾರಿ ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ತರಬೇತಿ ನೀಡಿದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ಅಧ್ಯಕ್ಷತೆ ವಹಿಸಿದ್ದರು. ವಲಯ ಉಪಾಧ್ಯಕ್ಷ, ರಾಷ್ಟ್ರೀಯ ತರಬೇತುದಾರ ದೀಪಕ್ ರಾಜ್, ನಿಕಟಪೂರ್ವಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಜಪಿಲ,ಯಾಹಿಯ ಬೆಳ್ಳಾರೆ ಉಪಸ್ಥಿತರಿದ್ದರು.